ದೇವನಹಳ್ಳಿ : ‘ಬ್ರಿಟೀಷರನ್ನು ದೇಶದಿಂದ ಹೊರಹಾಕಿ ಸ್ವಾತಂತ್ರ್ಯ ಪಡೆಯಲು ನಡೆದ ಹೋರಾಟದಲ್ಲಿ ಮಾದಿಗ ಸಮುದಾಯದ ವೀರ ಸೇನಾನಿಗಳ ಬಲಿದಾನವು ಆಗಿದೆ’ ಎಂದು ಮಾದಿಗ ದಂಡೋರ ಸಮಿತಿ ರಾಜ್ಯ ಪ್ರಚಾರ ಘಟಕದ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಮಾದಿಗ ದಂಡೋರ ರಾಜ್ಯ ಸಮಿತಿ ವತಿಯಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮದ ಪ್ರಥಮ ಹೋರಾಟಗಾರ ಸೇನಾಧಿಪತಿ ವೆಂಡಿವೀರನ್ ಪಗಾಡಿಯ ಅವರ 249ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
‘ಪ್ರತಿವರ್ಷ ತಮಿಳುನಾಡಿನಲ್ಲಿ ಆಗಸ್ಟ್ 20ರಂದು ವೆಂಡಿ ವೀರನ್ ಪಗಾಡಿಯ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಬಾರಿ ಕೋವಿಡ್ 19 ಸೋಂಕಿನ ಕಾರಣ ಅಲ್ಲಿಗೆ ಹೋಗಲಾಗುತ್ತಿಲ್ಲ. ಮಾದಿಗ ವಿವಿಧ ಸಂಘಟನೆ ಒಕ್ಕೂಟದ ವತಿಯಿಂದ ಇದೇ ಮೊದಲ ಬಾರಿಗೆ ದೇವನಹಳ್ಳಿಯಲ್ಲಿ ಆಚರಿಸಲಾಗುತ್ತಿದೆ ಎಂದು ಹೇಳಿದರು.