ಮಹಾಲಕ್ಷ್ಮಿ ಲೇಔಟ್: ಕೆಂಪೇಗೌಡರ ಜಯಂತಿ ಆಚರಣೆ

ಮಹಾಲಕ್ಷ್ಮಿ ಲೇಔಟ್: ಕೆಂಪೇಗೌಡರ ಜಯಂತಿ ಆಚರಣೆ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್ ನಲ್ಲಿರುವ ಶಾಸಕರ ಕಚೇರಿಯಲ್ಲಿಂದು ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು ಹಾಗೂ ಮಾಜಿ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯನವರು ಪಾಲ್ಗೊಂಡು ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಾಹಿತಿ ತಲಕಾಡು ಚಿಕ್ಕ ರಂಗೇಗೌಡ, ಓಬಿಸಿ ರಾಜ್ಯಾಧ್ಯಕ್ಷ ನೆಲ ನರೇಂದ್ರ, ಮಾಜಿ ಉಪ ಮಹಾಪೌರರಾದ ಎಸ್ ಹರೀಶ್, ಮಾಜಿ ಬಿಬಿಎಂಪಿ ಸದಸ್ಯರಾದ ಎಂ ಮಹದೇವ್, ಕೆ ವಿ ರಾಜೇಂದ್ರ ಕುಮಾರ್ ಜಯರಾಮಣ್ಣ, ವೆಂಕಟೇಶ್ ಮೂರ್ತಿ, ಚಿಕ್ಕೆಗೌಡ, ವೆಂಕಟೇಶ್, ಪದ್ಮಾವತಿ ಶ್ರೀನಿವಾಸ್, ಹಾಗೂ ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಕಾರ್ಯಕರ್ತರು ಮತ್ತು ಮಹಿಳಾ ಮುಖಂಡರು ಉಪಸ್ಥಿತರಿದ್ದರು.

Related