ಸ್ವಾತಂತ್ರ‍್ಯ ದಿನಾಚರಣೆಗೆ ಮಾಣಿಕ್ ಷಾ ಪೆರೇಡ್ ಸಜ್ಜು

ಸ್ವಾತಂತ್ರ‍್ಯ ದಿನಾಚರಣೆಗೆ ಮಾಣಿಕ್ ಷಾ ಪೆರೇಡ್ ಸಜ್ಜು

ಬೆಂಗಳೂರು : ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಯಲಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ 470 ಪೊಲೀಸ್ ಸಿಬ್ಬಂದಿಯ 20 ತುಕಡಿಗಳ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಶನಿವಾರ ಹೇಳಿದ್ದಾರೆ.

ಧ್ವಜಾರೋಹಣ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೊಲೀಸರ ಪೆರೇಡ್ ವೀಕ್ಷಣೆ ಮಾಡಲಿದ್ದಾರೆ. ಧ್ವಜಾರೋಹಣಕ್ಕೆ ಗೌರವ ಸಲ್ಲಿಸಲು ಕರ್ನಾಟಕ ರಾಜ್ಯ ಶಸ್ತ್ರಾಸ್ತ್ರ ಮೀಸಲು ಪಡೆ, ಬಿಎಸ್ಎಫ್, ಕೈಗಾರಿಕಾ ಭದ್ರತಾ ಪಡೆ, ಸಂಚಾರ ಪೊಲೀಸರು ಪಾಲ್ಗೊಳ್ಳಲಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಡಿಮೆ ಸಿಬ್ಬಂದಿ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

Related