ಭಕ್ತರಿಗೆ ಬಾಗಿಲು ತೆರದ ಮಂತ್ರಾಲಯ ಮಠ

ಭಕ್ತರಿಗೆ ಬಾಗಿಲು ತೆರದ ಮಂತ್ರಾಲಯ ಮಠ

ರಾಯಚೂರು : ಆರು ತಿಂಗಳ ಬಳಿಕ ಭಕ್ತರಿಗೆ ಬಾಗಿಲು ತೆರದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಮಠದ ಮಹಾದ್ವಾರವನ್ನು ತೆರೆದರು. ಭಕ್ತರು ಅಂತರ ಕಾಯ್ದುಕೊಂಡು ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.ಮಾರ್ಚ್ ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದಾಗ ಮಠಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಯಿತು. ಸುಮಾರು ಆರು ತಿಂಗಳ ಬಳಿಕ ಈಗ ಮತ್ತೆ ದರ್ಶನವನ್ನು ಆರಂಭಿಸಲಾಗಿದೆ.

ಮಠದ ಬಾಗಿಲು ತೆರೆಯುವ ಹಿನ್ನಲೆಯಲ್ಲಿ ಮಠದ ಆವರಣವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ವಾದ್ಯ, ವೇದಘೋಷಗಳ ಸಮೇತ ಆಗಮಿಸಿದ ಪೀಠಾಧಿಪತಿಗಳು ಭಕ್ತರ ಪ್ರವೇಶಕ್ಕೆ ಅವಕಾಶ ನೀಡಿದರು.

 

Related