ಸಾಮೂಹಿಕ ವಿವಾಹ ಮುಂದೂಡಿಕೆ

  • In State
  • August 5, 2021
  • 700 Views
ಸಾಮೂಹಿಕ ವಿವಾಹ ಮುಂದೂಡಿಕೆ

ದೊಡ್ಡಬಳ್ಳಾಪುರ : ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ. 13 ಮತ್ತು ಸೆ. 13ರಂದು ನಡೆಸಲು ಉದ್ದೇಶಿಸಿದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮುಂದೂಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಾ. ಈ .ರವಿಕುಮಾರ್ ತಿಳಿಸಿದರು. 3ನೇ ಅಲೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡುವAತೆ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾ ದತ್ತಿ ಇಲಾಖೆಯವರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ 29 ಅರ್ಜಿಗಳು ಬಂದಿದ್ದು, 27 ಅರ್ಜಿಗಳು ವಿವಾಹಕ್ಕೆ ಅರ್ಹವಾಗಿದ್ದವು. 3ನೇ ಅಲೆ ಸಂಭವಿಸಿದ್ದು ವಿವಾಹಕ್ಕೆ ಸರ್ಕಾರ ಅವಕಾಶ ನೀಡಿದರೆ ಕೋವಿಡ್-19 ನಿಯಮ ಉಲ್ಲಂಘನೆಮಾಡಿದಂತೆ. ಆದ ಕಾರಣ ತಾತ್ಕಾಲಿಕವಾಗಿ ಮುಂದೂಡುವಂತೆ ತಿಳಿಸಿದರು.

Related