ಅಧಿಕಾರಿಗಳ ವಿರುದ್ಧ ಸಚಿವ ಗರಂ

ಅಧಿಕಾರಿಗಳ ವಿರುದ್ಧ ಸಚಿವ ಗರಂ

ದಾವಣಗೆರೆ :  ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ನಗರ ಪ್ರದಕ್ಷಣೆ ಮಾಡಿದರು. ಮುಂಜಾನೆ ನಿದ್ದೆಯ ಮಂಪರಿನಲ್ಲಿದ್ದ ಅಧಿಕಾರಿಗಳ ಮೈ ಚಳಿ ಬಿಡಿಸಿದರು. ಕಾಮಗಾರಿಗಳ ವಿಳಂಬಕ್ಕೆ ತರಾಟೆಗೆ ತೆಗೆದುಕೊಂಡರು.

ಸೋಮವಾರ ಮುಂಜಾನೆ ಭೈರತಿ ಬಸವರಾಜ್ ನಗರದ ಬನಶಂಕರಿ ಬಡಾವಣೆ, ವಿದ್ಯಾನಗರದ ಎಲ್‌ಐಸಿ ಬಡಾವಣೆ ಸೇರಿದಂತೆ ಕುಂದವಾಡ ಕೆರೆಯ ಬಾಲಾಜಿ ನಗರದ ಬಳಿ ಭೇಟಿ ನೀಡಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ನಗರದ ಶಾಮನೂರು ದ್ವಿಮುಖ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ರನ್ನು ತರಾಟೆಗೆ ತೆಗೆದುಕೊಂಡರು.

ಬಳಿಕ ಅದೇ ರಸ್ತೆಯ ಇಕ್ಕೆಲಗಳಲ್ಲಿ ರಾಶಿ-ರಾಶಿ ಕಸ ಹಾಗೂ ಮದ್ಯದ ಬಾಟಲಿಗಳನ್ನು ಕಂಡು ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡರು. ಪಾಲಿಕೆ ಆಯುಕ್ತ ವಿಶ್ವನಾಥ್ ಅವರಿಗೆ, “ರೀ ಈ ಕೆಲಸವನ್ನು ಯಾರು ಮಾಡಬೇಕು, ಇನ್ನೂ ಕಾಮಗಾರಿ ಮುಗಿಸದಿದ್ದರೆ ಗುತ್ತಿಗೆದಾರನಿಗೆ ನೋಟಿಸ್ ನೀಡಿ” ಎಂದು ಸೂಚನೆ ಕೊಟ್ಟರು.

Related