ಸಚಿವ ಸ್ಥಾನ ನೀಡಲು ಆಗ್ರಹ

ಸಚಿವ ಸ್ಥಾನ ನೀಡಲು ಆಗ್ರಹ

ಕಮಲನಗರ:ಪ್ರಭು ಚೌವ್ಹಾಣ್ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಬೇಕು ಎಂದು ಬೀದರ್ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸುರೇಖಾ ಸುರೇಶ್ ಭೋಸಲೆ ಅವರು ಒತ್ತಾಯಿಸಿದ್ದಾರೆ. ಅಚ್ಚುಕಟ್ಟಾಗಿ  ಕಾರ್ಯನಿರ್ವಹಣೆ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಪಶುಸಂಗೋಪನೆ ಸಚಿವರಾಗಿ ಕಾರ್ಯನಿರ್ವಹಿಸಿದ್ದು, ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ.
ವಿಶ್ವಕ್ಕೆ ಮಾರಣಾಂತಿಕವಾಗಿ ಕಾಡಿದ ಸೋಂಕನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಿ, ರಾಜ್ಯಕ್ಕೆ ಸೋಂಕು ಇಳಿಕೆಯಲ್ಲಿ ಬೀದರ್ ಜಿಲ್ಲೆ ಮಾದರಿ ಮಾಡಿದ ಪ್ರಭು ಚವ್ಹಾಣ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಪಕ್ಷದ ಹೈಕಮಾಂಡ್ ಕಾರ್ಯಕರ್ತರ ಮನವಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

Related