ಸ್ಮಾರ್ಟ್ ಸಿಟಿ ಕಾಮಗಾರಿ ಮಂದಗತಿಗೆ ಸಚಿವ ಅಸಮಾಧಾನ

ಸ್ಮಾರ್ಟ್ ಸಿಟಿ ಕಾಮಗಾರಿ ಮಂದಗತಿಗೆ ಸಚಿವ ಅಸಮಾಧಾನ

ದಾವಣಗೆರೆ : ನಗರದಲ್ಲಿ ಸಚಿವರಾದ ಭೈರತಿ ಬಸವರಾಜ್ ಅವರು, ಬನಶಂಕರಿ ಬಡಾವಣೆ, ವಿದ್ಯಾ ನಗರದ ಎಲ್‌ಐಸಿ ಬಡಾವಣೆ ಸೇರಿದಂತೆ ಕುಂದವಾಡ ಕೆರೆಯ ಬಾಲಾಜಿ ನಗರದ ಬಳಿ ಭೇಟಿ ನೀಡಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ದಾವಣಗೆರೆ ನಗರದ ಶಾಮನೂರು ದ್ವಿಮುಖ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸದಿದ್ದರೆ ಗುತ್ತಿಗೆದಾರನಿಗೆ ನೋಟಿಸ್ ನೀಡಿ. ಮುಂದಿನ ದಿನ ಮತ್ತೆ ನಾನು ಇಲ್ಲಿಗೆ ಬಂದಾಗ ಎಲ್ಲಾ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣಗೊಂಡಿರಬೇಕು” ಎಂದು ಅಧಿಕಾರಿಗಳಿಗೆ ಗಡುವು ನೀಡಿದರು.

ಈ ವೇಳೆ ಸಂಸದ ಜಿ.ಎಂ. ಸಿದ್ದೇಶ್ವರ್, ಮೇಯರ್ ಅಜಯ್ ಕುಮಾರ್ ಮತ್ತಿತರರು ಇದ್ದರು.

Related