ಸಿ.ಪಿಯೋಗೇಶ್ವರ್‌ಗೆ ಮಂತ್ರಿಗಿರಿ ಭರವಸೆ

ಸಿ.ಪಿಯೋಗೇಶ್ವರ್‌ಗೆ ಮಂತ್ರಿಗಿರಿ ಭರವಸೆ

ಬೆಂಗಳೂರು : ಸಿ.ಪಿ ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಯೋಗೇಶ್ವರ್ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ ಎಂದು ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಚುರುಕುಗೊಂಡಿರುವ ಬೆನ್ನಲ್ಲೇ, ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೀಶ್ವರ್ ಅವರು ಸಚಿವ ಸಂಪುಟ ಸೇರುವುದು ಖಚಿತವಾಗಿದೆ.

Related