ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಗಂಗಾವತಿ : ಕಾರ್ಪೋರೇಟ್ ಭೂಮಾಲೀಕರಿಗೆ ಶಾಸನ ತಿದ್ದುಪಡಿ ಕೈಬಿಡುವಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ನಗರದ ಕೇಂದ್ರ ಬಸ್ ನಿಲ್ದಾಣದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಎಐಟಿಯುಸಿ ತಾಲೂಕ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಮಾತನಾಡಿದ ಪ್ರತಿಭಟನಾಕಾರರು, ಕೋವಿಡ್ -19 ಸಾಂಕ್ರಾಮಿಕ ರೋಗವು ದೇಶದ ಜನತೆಗೆ ಬಾಧಿಸುತ್ತ್ತಿದೆ. ಗರಿಬ್ ಕಲ್ಯಾಣ  ಯೋಜನೆಯಲ್ಲಿ ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಆರು ತಿಂಗಳವರೆಗೆ ಪ್ರತಿ ವ್ಯಕ್ತಿಗೆ 10 ಕೆ.ಜಿ ನೀಡಬೇಕು, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ಮಾನವ ದಿನಗಳನ್ನು 200ಕ್ಕೆ ಸೇರಿಸಬೇಕು. ಸಾರ್ವಜನಿಕ ಉದ್ಯಮಿಗಳ ಖಾಸಗೀಕರಣ ನಿಲ್ಲಬೇಕು ಎಂದು ಒತ್ತಾಯಿಸಿದರು.

Related