ಡಿಕೆ ಬ್ರದರ್ಸ್ ಸೊಕ್ಕಡಗಿಸಲು ಮೋದಿ ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದಾರೆ: ಮಾಜಿ ಪ್ರಧಾನಿ

ಡಿಕೆ ಬ್ರದರ್ಸ್ ಸೊಕ್ಕಡಗಿಸಲು ಮೋದಿ ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದಾರೆ: ಮಾಜಿ ಪ್ರಧಾನಿ

ಹಾಸನ: ರಾಜ್ಯದಲ್ಲಿ ಡಿಕೆ ಸಹೋದರರ ದೌರ್ಜನ್ಯ ಅಡಗಿಸಲೆಂದು ಈ ಬಾರಿ ಲೋಕಸಭಾ ಚುನಾವಣೆಗೆ ನನ್ನ ಅಳಿಯ ಡಾ. ಮಂಜುನಾಥ್ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಗೆ ಇಳಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.

ನಗರದಲ್ಲಿ ಪ್ರಜ್ವಲ್ ಪರ ಪ್ರಚಾರ ಮಾಡುತ್ತಿರುವ ವೇಳೆ ಮಾತನಾಡಿದ ಅವರು, ಡಿಕೆ ಬ್ರದರ್ಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಜಯದೇವ ಸಂಸ್ಥೆಯನ್ನು ಇಡೀ ದೇಶದಲ್ಲಿ ಎತ್ತರಕ್ಕೆ ಬೆಳೆಸಿದ ಕೀರ್ತಿ ಮಂಜುನಾಥ್ ಅವರಿಗೆ ಸಲ್ಲುತ್ತದೆ. ಅವರು ನಮ್ಮ ಪಕ್ಷದಿಂದಲೇ ಸ್ಪರ್ಧಿಸಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದರು. ಆ ಅಣ್ಣ ತಮ್ಮರ (ಡಿಕೆ ಸಹೋದರರ) ದೌರ್ಜನ್ಯ ಏನಿದೆ, ಅದನ್ನು ನಿಲ್ಲಿಸಲೇಬೇಕು ಎಂದು ಮಂಜುನಾಥ್​​ರನ್ನು ಕಣಕ್ಕಿಳಿಸಿದ್ದಾರೆ.

 

Related