ಬೆಂಗಳೂರು: ರಾಜ್ಯದಲ್ಲೆಡೆ ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಕಣ ರಂಗೇರುತಿದ್ದು, ಎಲ್ಲ ಪಕ್ಷದ ಅಭ್ಯರ್ಥಿಗಳು ಬರದಿಂದ ಪ್ರಚಾರದಲ್ಲಿ ತೊಡಗಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು (ಶನಿವಾರ ಏಪ್ರಿಲ್ 20) ರಂದು ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರಿಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರಿಗೆ ಸುಮಾರು 2000 ಪೊಲೀಸ್ ಸಿಬ್ಬಂದಿಗಳನ್ನು ಆಯೋಜಿಸಲಾಗಿದ್ದು ಅರೆಮನೆ ಮೈದಾನದ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ಇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಂದು ಹೋಗುವವರೆಗೂ ಹೈ ಸೆಕ್ಯೂರಿಟಿ ನಿರ್ಮಿಸಲಾಗಿದೆ ಎಂಬ ಮಾಹಿತಿ ಒದಗಿ ಬಂದಿದೆ.
ಇದರ ಜೊತೆಗೆ ಅರಮನೆ ಮೈದಾನ ಹಾಗೂ ಹೆಚ್ಕ್ಯೂಟಿಸಿ ಸುತ್ತಮುತ್ತ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ನೋ ಫ್ಲೈ ಜೋನ್ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.