ಈಶ್ವರಪ್ಪ ಪರ ಎಂಪಿ ರೇಣುಕಾಚಾರ್ಯ ಬ್ಯಾಟಿಂಗ್..!   

ಈಶ್ವರಪ್ಪ ಪರ ಎಂಪಿ ರೇಣುಕಾಚಾರ್ಯ ಬ್ಯಾಟಿಂಗ್..!   

ದಾವಣಗೆರೆ: ಈಶ್ವರಪ್ಪ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಅವಕಾಶ ಸಿಗಲಿಲ್ಲ ಅವರು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್ ಕೊಡಬೇಕಾಗಿತ್ತುಎಂದು ಎಂಪಿ ರೇಣುಕಾಚಾರ್ಯ ಅವರು ಹೇಳಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಈಶ್ವರಪ್ಪ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ನಮಗೆ ಗೊತ್ತಿಲ್ಲ. ನಾವು ಭಿನ್ನಮತಿಯರು ಅಲ್ಲ ಬಂಡಾಯರು ಅಲ್ಲ. ನಮಗೆ ಎಲ್ಲರೂ ಸ್ನೇಹಿತರು ಎಂದು ರೇಣುಕಾಚಾರ್ಯ ಅವರು ಹೇಳಿದರು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಯ ನಿಲುಗಡೆಯ ವಿಚಾರವನ್ನು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ನಾವೆಲ್ಲ ಒಟ್ಟಾಗಿ ಸೇರಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ನಾವೆಲ್ಲರೂ ಒಟ್ಟಾಗಿ ನಿಂತು ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.

Related