606 ಕಾರ್ಮಿಕರ ಗಂಟಲುದ್ರವ ಮಾದರಿ ಸಂಗ್ರಹ

606 ಕಾರ್ಮಿಕರ ಗಂಟಲುದ್ರವ ಮಾದರಿ ಸಂಗ್ರಹ

ಮುದ್ದೇಬಿಹಾಳ : ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಆಗಮಿಸಿರುವ ವಲ¸É ಕಾರ್ಮಿಕರನ್ನು ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿದ್ದು ಇದೀಗ ಅವರ ಗಂಟಲು ಮಾದರಿ ಸಂಗ್ರಹಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಳೆದ ನಾಲ್ಕು ದಿನಗಳಿಂದ ವಲಸೆ ಕಾರ್ಮಿಕರ ಗಂಟಲು ದ್ರವದ ಮಾದರಿ ಸಂಗ್ರಹಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ ಕ್ವಾರಂಟೈನ್ ಕೇಂದ್ರಗಳಿಗೆ ತೆರಳಿ ಕಾರ್ಮಿಕರ ಸ್ವ್ಯಾಬ್ ಸಂಗ್ರಹಿಸುತ್ತಿದ್ದಾರೆ. ತಾಲೂಕಾಡಳಿತ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ ಹಾಗೂ ಹಿರಿಯ ಪ್ರಯೋಗಾಲಯ ತಜ್ಞ ಎಂ.ಚಿನಿವಾರ ಮೇಲ್ವಿಚಾರಣೆಯಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿಯ ಎಲ್ಲ ಕ್ವಾರಂಟೈನ್ ಕೇಂದ್ರಗಳಲ್ಲಿ ಕಾರ್ಮಿಕರ ಗಂಟಲು ದ್ರವದ ಮಾದರಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಒಟ್ಟು 2334 ಕ್ವಾರಂಟೈನ್ ಕಾರ್ಮಿಕರಿದ್ದು ಈಗಾಗಲೇ ಮೇ.20ರವರೆಗೆ 606 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಅಗತ್ಯ ಸುರಕ್ಷತಾ ಸಾಮಗ್ರಿಗಳೊಂದಿಗೆ ವಲಸೆ ಕಾರ್ಮಿಕರ ಗಂಟಲು ಮಾದರಿಯನ್ನು ಸಂಗ್ರಹಿಸುವ ಕಾರ್ಯದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ತೊಡಗಿದ್ದಾರೆ.

Related