ಮುನಿರತ್ನಗೆ ಕೈ ತಪ್ಪಿದ ಸಚಿವ ಸ್ಥಾನ

ಮುನಿರತ್ನಗೆ ಕೈ ತಪ್ಪಿದ ಸಚಿವ ಸ್ಥಾನ

ಕೋಲಾರ : ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ವಲಸೆ ಹಾಗೂ ಮೂಲ ಬಿಜೆಪಿಯ ಹಿರಿಯ ಶಾಸಕರಿಗೆ ಅವಕಾಶ ನೀಡಲಾಗುತ್ತಿದೆ. ಮುನಿರತ್ನ ಮಂತ್ರಿಯಾಗುವ ಹಾಗೂ ಕೈ ಬಿಡುವ ಬಗ್ಗೆ ತಿಳಿದಿಲ್ಲ” ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ಈ ವೇಳೆ ಮಾತನಾಡಿದ ಸಚಿವರು, “ಹಿರಿಯ ಶಾಸಕರು ಮಂತ್ರಿಯಾಗಬೇಕೆಂದು ಆಸೆ ಪಟ್ಟಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ರಾಜ್ಯಾಧ್ಯಕ್ಷರು ತೀರ್ಮಾನ ಕೈಗೊಳ್ಳಬೇಕಿದೆ. ಮುನಿರತ್ನ ಅವರನ್ನು ಸೇರಿಸಿಕೊಳ್ಳುವ, ಕೈ ಬಿಡುವ ಬಗ್ಗೆ ತಿಳಿದಿಲ್ಲ” ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಂ. ಪಿ. ರೇಣುಕಾಚಾರ್ಯ ಅವರ ಹೇಳಿಕೆಗಳು ವೈಯಕ್ತಿಕವಾದದ್ದು. ಅವರಿಬ್ಬರ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ವಿಲ್ಲ. ಹೆಚ್. ನಾಗೇಶ್ ಅವರನ್ನು ಸಂಪುಟದಿಂದ  ಕೈ ಬಿಡುವ ಬಗ್ಗೆ ಮಾಹಿತಿ ತಿಳಿದಿಲ್ಲ” ಎಂದು ಸ್ಪಷ್ಟಪಡಿಸಿದರು.

ಜಿ. ಎಚ್. ತಿಪ್ಪಾರೆಡ್ಡಿ ಅವರ ಹೇಳಿಕೆಗಳು ಸಹ ವೈಯಕ್ತಿಕ. ವೈಯಕ್ತಿಕವಾಗಿ ಎಲ್ಲರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಯಾರ ವಿರುದ್ದ ಹೇಳಿಕೆ ಕೊಟ್ಟರು ಅದು ವೈಯಕ್ತಿಕ. ಎಲ್ಲರನ್ನೂ ಸಮಾಧಾನಪಡಿಸುವ ಕೆಲಸ ಹಿರಿಯ ನಾಯಕರು ಮಾಡುತ್ತಾರೆ ಎಂದು ಶ್ರೀರಾಮುಲು ಹೇಳಿದರು.

Related