ರಾಯಚೂರು :ನಗರದ ಜಾಕಿರ ಹುಸೇನ್ ವೃತ್ತದ ಬಳಿ ಎಂಟನೇ ವಾರ್ಡ್ನ ಜೆಡಿಎಸ್ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಸದಸ್ಯ ಮಕ್ಬೂಲ್ ಕೊಲೆಯಾದ ವ್ಯಕ್ತಿ. ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ನಾಲ್ವರು ದುಷ್ಕರ್ಮಿಗಳು ಲಾಂಗ್ಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆಯಿಂದ ತೀವ್ರ ರಕ್ತ ಸ್ರಾವ ಉಂಟಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಕ್ಬೂಲ್ ರನ್ನು ರಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಗರದ ಬೊಳ್ಳಮಾನದೊಡ್ಡಿ ಬಳಿ ಆರೋಪಿಗಳನ್ನು ಸೆರೆ ಹಿಡಿಯಲು ತೆರಳಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ರಕ್ಷಣೆಗಾಗಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ.