ಕಲಬುರಗಿ : ಜಿಲ್ಲೆಯ ದೋದುತಾಯಿ ನಗರದಲ್ಲಿ ರಾಜಸ್ಥಾನ ಮೂಲದ ಟೈಲ್ಸ್ ಉದ್ಯಮಿಗೆ ಗುಂಡಿಕ್ಕಿ ಹತ್ಯೆಗೈದ ದುರ್ಘಟನೆ ನಡೆದಿದೆ.
ಸುನೀಲ್ ರಂಕಾ (42) ಗುಂಡೇಟಿಗೆ ಬಲಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾಜಸ್ಥಾನ ಮೂಲದ ಸುನೀಲ್ ಟೈಲ್ಸ್ ವ್ಯಾಪಾರಿಯಾಗಿದ್ದು, ಇಲ್ಲಿನ ಗೋದುತಾಯಿ ನಗರ ಮನೆಯ ಎದುರು ನಿಂತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಸುನೀಲ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.