ಅಳಿಯನಿಂದಲೇ ಅತ್ತೆ ಕೊಲೆ

ಅಳಿಯನಿಂದಲೇ ಅತ್ತೆ ಕೊಲೆ

ಕಮಲಾಪುರ : ಅಳಿಯನೇ ಅತ್ತೆಯ ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಗೈದಿರುವ ಘಟನೆ ತಾಲ್ಲೂಕಿನ ಭೀಮನಾಳ ಕಮಲಾಪುರ ಮಧ್ಯದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚಿಂದಿ ಬಸವಣ್ಣ ದೇವಾಲಯದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಾಗಲಗಾಂವ ಗ್ರಾಮದ ಲುಗಜಾಬಾಯಿ ಗೋವಿಂದ ಬಿರಾದಾರ (40) ಮೃತ ಮಹಿಳೆಯಾಗಿದ್ದು, ಇವರ ಅಳಿಯ ಭೀಮನಾಳ ಗ್ರಾಮದ ರಾಮ ಪ್ರಭು ಹುಡಗೆ ಕೊಲೆ ಮಾಡಿದ ಆರೋಪಿ.

ಸ್ಥಳೀಯರ ರಾಜಿ ಸಂಧಾನದ ಮೇರೆಗೆ ಮಂಗಳವಾರ ಮತ್ತೆ ಗಂಡನ ಮನೆಗೆ ತಂದು ಬಿಟ್ಟಿದ್ದರು. ಜೊತೆಗೆ ತಾಯಿ ಲುಗಜಾಬಾಯಿ ಸಹ ಉಳಿದುಕೊಂಡಿದ್ದರು. ಅಳಿಯ ರಾಮ ಬುಧವಾರ ಬೆಳಿಗ್ಗೆ ಮತ್ತೆ ಜಗಳ ಮಾಡಿ ಹಲ್ಲೆಗೆ ಮಂದಾಗಿದ್ದಾನೆ.

ಹೀಗಾಗಿ ಲುಗಜಾಬಾಯಿ ಮಗಳು ರೇಣುಕಾ ಸೇರಿ ದೂರು ದಾಖಲಿಸಲು ಕಮಲಾಪುರ ಪೊಲೀಸ್ ಠಾಣೆಗೆ ಬರುತ್ತಿದ್ದಾಗ ಮಾರ್ಗ ಮಧ್ಯೆ ತಡೆದು ತಲೆಗೆ ಕಲ್ಲಿನಿಂದ ಹೊಡೆದಿದ್ದಾನೆ. ಬೇಡ ನನ್ನ ತಾಯಿ ಜೀವ ಹೊಡಿಬೇಡ ಎಂದು ಪರಿಪರಿಯಾಗಿ ರೇಣುಕಾ ಬೇಡಿಕೊಂಡರೂ ಬಿಡದೆ ಕಲ್ಲು ಎತ್ತಿ ಹಾಕಿದ್ದಾನೆ. ಸ್ವಲ್ಪ ಹೊತ್ತಿನಲ್ಲೆ ನನ್ನ ತಾಯಿ ಜೀವ ಬಿಟ್ಟಳು ಎಂದು ಪ್ರತ್ಯಕ್ಷದರ್ಶಿ ರೇಣುಕಾ ಹೇಳಿದ್ದಾಳೆ.

Related