ಬಿಜೆಪಿಯಲ್ಲಿ ಗೊಂದಲಗಳಿಲ್ಲ : ಸ್ಪಷ್ಟನೆ

ಬಿಜೆಪಿಯಲ್ಲಿ ಗೊಂದಲಗಳಿಲ್ಲ : ಸ್ಪಷ್ಟನೆ

ದೇವದುರ್ಗ : ಶಹಾಪುರ ರಸ್ತೆಯ ದೇವದುರ್ಗದ ಎಸ್.ಬಿ. ಕಲ್ಯಾಣ ಮಂಟಪಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಾಧ್ಯಕ್ಷರು, ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಹಮ್ಮಿಕೊಂಡಿದ್ದ ಕಾರಣ ಪಕ್ಷದ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯನ್ನು ತಾಲೂಕು ಮಟ್ಟದಲ್ಲಿ ನಡೆಸುವುದು ಹಾಗೂ ಕೊರೋನಾದಿಂದಾಗಿ ಕ್ವಾರಂಟೈನ್‌ನಲ್ಲಿರುವವರಿಗೆ ಊಟದ ವ್ಯವಸ್ಥೆ ಹಾಗೂ ಆಂಬುಲೆನ್ಸ್ ಮತ್ತು ಕೊರೋನಾ ಕಾಯಿಲೆ ಬಂದು ಸಾವನ್ನಪ್ಪಿದವರ ಶವಸಂಸ್ಕಾರಕ್ಕೆ ಸಹಾಯ ಸಹಕಾರ ಬಗ್ಗೆ ಕುರಿತು ಸಭೆಯಲ್ಲಿ ಚರ್ಚಿಸುವುದು ಮತ್ತು ಪಕ್ಷದ ಸಂಘಟನೆ ಮಾಡಿ ಕ್ರಮ ಕೈಗೊಳ್ಳುವುದಕ್ಕಾಗಿ ಪ್ರವಾಸ ಹಮ್ಮಿಕೊಳ್ಳುವುದಾಗಿ ಹೇಳಿದರು.

ಬಿಜೆಪಿ ಪಕ್ಷದಲ್ಲಿ ಮುಖ್ಯಮಂತ್ರಿ ಮತ್ತು ಬಿ ಎಲ್ ಸಂತೋಷ್ ಎರಡು ಗುಂಪುಗಳಿವೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ನಮ್ಮ ಪಕ್ಷದ ಹಿರಿಯ ಮುಖಂಡರು ಬಿಎಸ್ ಯಡಿಯೂರಪ್ಪನವರು ಹಾಗೂ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಅವರು ಬಿಎಲ್ ಸಂತೋಷ್ ಅವರು ಪಕ್ಷದ ಸಂಘಟನಾಕಾರರು ಅವರ ಮಧ್ಯದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ನಾವೆಲ್ಲ ಒಗ್ಗಟ್ಟಾಗಿ ಪಕ್ಷ ಕಟ್ಟುವುದರಲ್ಲಿ ನಿರತರಾಗಿದ್ದೇವೆ ಎಂದು ಹೇಳಿದರು.

Related