ಬಲವಂತದ ಬಂದ್‌ಗೆ ಅವಕಾಶವಿಲ್ಲ : ಎಸ್‌ಪಿ

ಬಲವಂತದ ಬಂದ್‌ಗೆ ಅವಕಾಶವಿಲ್ಲ : ಎಸ್‌ಪಿ

ವಿಜಯಪುರ  : ರಾಜ್ಯ ಸರ್ಕಾರವು ಮರಾಠಾ ಅಭಿವೃದ್ಧಿ ನಿಗಮ ರಚನೆ ಮಾಡಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರೆ ನೀಡಿರುವ ಬಂದ್ ವಿಜಯಪುರದಲ್ಲಿ ಏನಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಈಗಾಗಲೇ ರಾಜ್ಯದ ಇತರೆಡೆಗಿಂತ ಬಂದ್ ವಿಷಯ ಹೆಚ್ಚು ಕಾವು ಪಡೆದಿದೆ. ಕಾರಣ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ವ್ಯಾಪಾರಸ್ಥರು, ಹಿಂದೂಪರ ಸಂಘಟನೆಗಳ ಮುಖಂಡರೊಂದಿಗೆ  ಸಭೆ ನಡೆಸಿ, ಬಂದ್ ವಿಫಲಗೊಳಿಸುವಂತೆ ಕರೆ ನೀಡಿದ್ದಾರೆ.

ಶಾಸಕ ಸವಾಲನ್ನು ಅಷ್ಟೇ ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು, ಕಾರ್ಯಕರ್ತರು, ಬಂದ್ ಯಶಸ್ವಿಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಅಂಗಡಿ, ಮಳಿಗೆಗಳನ್ನು ಭೇಟಿ ಮಾಡಿ, ಬಂದ್ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
ಬಲವಂತಕ್ಕೆ ಅವಕಾಶವಿಲ್ಲ ನಗರದಲ್ಲಿ ಬಲವಂತವಾಗಿ ಅಂಗಡಿ, ಮಳಿಗೆಗಳನ್ನು ಮುಚ್ಚಿಸುವಂತಿಲ್ಲ. ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟು ಮಾಡುವಂತಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್ ಎಚ್ಚರಿಕೆ ನೀಡಿದ್ದಾರೆ.

Related