ರಾಜ್ಯದ್ಲಲಿ ಮುಖ್ಯಮಂತ್ರಿ ಬದಲಾವಣೆಗೆ ಪ್ರಶ್ನೆ ಇಲ್ಲ!

ರಾಜ್ಯದ್ಲಲಿ ಮುಖ್ಯಮಂತ್ರಿ ಬದಲಾವಣೆಗೆ ಪ್ರಶ್ನೆ ಇಲ್ಲ!

ಉಡುಪಿ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅತ್ಯಂತ ಸಮರ್ಥವಾಗಿ ರಾಜ್ಯ ಮೆಚ್ಚುವಂತೆ ಎಲ್ಲಾ ರಾಜಕಾರಣಿಗಳು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಗಳು ನೀಡುವ ಕಾರ್ಯಸೂಚಿ, ಮಾರ್ಗಸೂಚಿ, ಆದೇಶವನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ಮೂಲಕ ಕೊರೋನಾ ಮುಕ್ತ ಕರ್ನಾಟಕ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಬ್ಲಾಕ್ ಫಂಗಸ್‌ಗೆ ಆಸ್ಪತ್ರೆಗೆ ವ್ಯವಸ್ಥೆಗೊಳಿಸಿ ಅಲ್ಲಿ ಉಚಿತ ಚಿಕಿತ್ಸೆಗೆ ಕ್ರಮಕೈಗೊಳ್ಳುವಂತೆ ಸರ್ಕಾರ ಆದೇಶ ಮಾಡಿದೆ. ಕೊರೋನಾ ನಿಯಂತ್ರಣದಲ್ಲಿ ಗ್ರಾ.ಪಂಗಳಿಗೂ ಜವಾಬ್ದಾರಿ ನೀಡಿದೆ. ಸೋಂಕಿತರು ತರಲು ವಾಹನ ಖರೀದಿಸಲು ಪಂಚಾಯತ್‌ಗಳಿಗೂ ಅವಕಾಶ ನೀಡಿದೆ ಎಂದು ತಿಳಿಸಿದ್ದಾರೆ.

Related