ಗ್ರಾಮ ವಾಸ್ತವ್ಯಕ್ಕೆ ಗ್ರಾಮಸ್ಥರೇ ಬರಲಿಲ್ಲ!

ಗ್ರಾಮ ವಾಸ್ತವ್ಯಕ್ಕೆ ಗ್ರಾಮಸ್ಥರೇ ಬರಲಿಲ್ಲ!

ಬಾಗಲಕೋಟೆ : ಜಿಲ್ಲೆಯ ಹುನಗುಂದ ತಾಲೂಕಿನ ಬೇವಿನಹಟ್ಟಿ ಗ್ರಾಮದಲ್ಲಿ ತಹಶೀಲ್ದಾರ್ ಜಿ.ಎಂ.ಕುಲಕರ್ಣಿ ಮತ್ತು ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಗ್ರಾಮಸ್ಥರೇ ಬರದೆ ನೀರಸ ಪ್ರತಿಕ್ರಿಯೆ ತೋರಿಸಿದ್ದಾರೆ.

ತಹಶೀಲ್ದಾರರ ಗ್ರಾಮ ವಾಸ್ತವ್ಯಕ್ಕೆ ಸಾರ್ವಜನಿಕರು ಯಾರೂ ಬಾರದೆ ಕಾರ್ಯಕ್ರಮ ಸಭಾಂಗಣ ಬಿಕೋ ಎನ್ನುತ್ತಿರುವ ದೃಶ್ಯ ಕಂಡುಬಂತು.

ಕಾರ್ಯಕ್ರಮಕ್ಕೆ ಜನರೇ ಬಾರದ ಕಾರಣ ಅಧಿಕಾರಿಗಳು ಸುಮ್ಮನೆ ಕುಳಿತುಕೊಳ್ಳಬೇಕಾಯಿತು. ಗ್ರಾಮದಲ್ಲಿ ಸಮಸ್ಯೆಗಳೇ ಇಲ್ಲವೇ ಅಥವಾ ಆಡಳಿತ ವ್ಯವಸ್ಥೆ ಬಗ್ಗೆ ಜನರಿಗೆ ಭರವಸೆ ಇಲ್ಲವೇ ಎಂಬ ಅನುಮಾನಗಳಿಗೆ ಬೇವಿನಮಟ್ಟಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಎಡೆಮಾಡಿಕೊಟ್ಟಿತು.

Related