ಯಾರಿಗೂ ಸಚಿವ ಸ್ಥಾನದ ಭರವಸೆ ಕೊಟ್ಟಿಲ್ಲ : ಸಿಎಂ

ಯಾರಿಗೂ ಸಚಿವ ಸ್ಥಾನದ ಭರವಸೆ ಕೊಟ್ಟಿಲ್ಲ : ಸಿಎಂ

ಬೆಂಗಳೂರು : ನಾನು ಯಾರೊಬ್ಬರಿಗೂ ಸಚಿವರಾಗುತ್ತೀರಿ ಎಂದು ಭರವಸೆ ಕೊಟ್ಟಿಲ್ಲ. ಕೆಲವರು ಹಾಗೆ ಹೇಳಿದರೆ ನಾನೇನು ಮಾಡಲು ಸಾಧ್ಯ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ಮಂತ್ರಿಯಾಗುತ್ತೀರಿ ಎಂದು ಯಾರಿಗೂ ಹೇಳಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಿದ್ದೇನೆ. ಇದು ಆ ಭಾಗದ ಜನತೆಯ ಬಹುದಿನಗಳ ಕನಸಾಗಿತ್ತು. ಇಂದು ನನಸಾಗುವ ಸಮಯ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರತಿಮೆ ನಿರ್ಮಾಣ ಕಾಮಗಾರಿ ಆದಷ್ಟು ಶೀಘ್ರ ಆಗಬೇಕು. ಈಗಾಗಲೇ ಅದಕ್ಕೆ ನೂರು ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ 200 ಕೋಟಿ ಬಿಡುಗಡೆ ಮಾಡುತ್ತೇನೆ.

ಬಸವಣ್ಣನವರ ಪ್ರತಿಮೆ ನಿರ್ಮಾಣ ಕಾಮಗಾರಿ ಶೀಘ್ರವಾಗಿ ನೆರವೇರಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಾಗಿದೆ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಆದಷ್ಟು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲಾಗುವುದು ಎಂದು ಸಿಎಂ ಹೇಳಿದರು.

Related