ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯದಲ್ಲಿ ಆಪರೇಷನ್ ಕಮಲ ಮತ್ತು ಆಪರೇಷನ್ ಹಸ್ತಗಳು ಜೋರಾಗಿ ನಡೆಯುತ್ತಿದ್ದು, ಮತ್ತೊಂದು ಆಪರೇಷನ್ ಹಸ್ತ ನಡೆದಿದೆ.
ಹೌದು, ಲೋಕಸಭಾ ಚುನಾವಣೆಗೆ ಎಂದು ಎಲ್ಲಾ ಅಭ್ಯರ್ಥಿಗಳು ಬರದಿಂದ ಪ್ರಚಾರವನ್ನು ಕೈಗೊಂಡಿದ್ದು ಇದರ ಬೆನ್ನಲ್ಲೇ ಮೈಸೂರಿನಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಲು 30 ಬಿಜೆಪಿ ಮುಖಂಡರು ತಯಾರಾಗಿದ್ದಾರೆ.
ಯೆಸ್… ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.