ಪಿಡಿಒ ಎಸಿಬಿ ಬಲೆಗೆ

ಪಿಡಿಒ ಎಸಿಬಿ ಬಲೆಗೆ

ಕೊರಟಗೆರೆ :ಲಂಚ ಸ್ವೀಕರಿಸುತ್ತಿದ್ದ ವೇಳೆ ಕೋಳಾಲ ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗ್ರಾಮಸ್ಥರೊಬ್ಬರಿಗೆ ಇ-ಸ್ವತ್ತು ಮಾಡಿಕೊಡಲು 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಾ.್ರಪಂ ಕಾರ್ಯದರ್ಶಿ ತಿಮ್ಮಯ್ಯ ಹಾಗೂ ಕಂಪ್ಯೂಟರ್ ಆಪರೇಟರ್ ಲಕ್ಕಣ್ಣ ಎಂಬಿಬ್ಬರು ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಸೋಮವಾರ ಬಿದ್ದಿದ್ದಾರೆ.
ತಾಲ್ಲೂಕಿನಲ್ಲಿ ಕಳೆದ ಮೂರು ತಿಂಗಳಲ್ಲಿ ಇದು 5ನೇ ಲಂಚ ಪ್ರಕರಣವಾಗಿದೆ. ಎಸಿಬಿ ಡಿವೈಎಸ್ಪಿ ಮಂಜುನಾಥ್.ಇನ್ಸ್ ಪೆಕ್ಟರ್ ಗಳಾದ ವಿಜಯಲಕ್ಷ್ಮಿ, ವೀರೆಂದ್ರ ಮತ್ತು ಸಿಬ್ಬಂದಿ ವರ್ಗ ಬೀಸಿದ ಬಲೆಗೆ ಸಿಕ್ಕಿಬಿದ್ದಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ ಎಂದು ತಿಳಿದುಬಂದಿದೆ.

Related