ಚಿಂಚೋಳಿ : ತಾಲ್ಲೂಕಿನ ಪ್ರಧಾನ ಸಿವಿಲ್ ನ್ಯಾಯಾಲಯದ ಕಟ್ಟಡ ಸುಮಾರು ನೂರು ವರ್ಷಕ್ಕಿಂತಲೂ ಹಳೆಯದಾಗಿದ್ದು, ವಿಚಾರಣ ಕಡತ, ಹಳೆಯ ಕಡತಗಳು ಹಾಳಾಗುವ ಪರಿಸ್ಥಿತಿ ಎದುರಾಗಿದೆ. ನೂತನ ಕಟ್ಟಡವನ್ನು ತಕ್ಷಣ ಮಂಜೂರು ಮಾಡುವಂತೆ ಬುಧವಾರ ವಕೀಲ ಸಂಘದ ಮಾಜಿ ಅಧ್ಯಕ್ಷ ಶ್ರೀಮಂತ ಕಟ್ಟಿಮನಿ ಸರ್ಕಾರಕ್ಕೆ ಮನವಿ ಮಾಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಯ ಹಂತದಲ್ಲಿದ್ದು, ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಮಂಜೂರಾತಿ ಮಾಡಬೇಕೆಂದು ಶ್ರೀಮಂತ ಕಟ್ಟಿಮನಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಹಲವು ಬಾರಿ ವಕೀಲರ ಸಂಘ ಮನವಿ ಮಾಡಿದೆ. ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ನ್ಯಾಯಾಲಯದ ಸಭಾಂಗಣ, ನ್ಯಾಯಾಧೀಶರ ಕಚೇರಿ, ಆಡಳಿತ ಕಚೇರಿ, ಮಳೆಯಿಂದ ಸೋರುತ್ತಿದ್ದು ಸಿಬ್ಬಂದಿಗಳಿಗೆ ಕೆಲಸ ಮಾಡಲು ತೊಂದರೆಯಾಗುತ್ತಿದೆ ಎಂದರು.