ಪೈರು ನಾಟಿ ಮಾಡಿ ಪ್ರತಿಭಟನೆ

ಪೈರು ನಾಟಿ ಮಾಡಿ ಪ್ರತಿಭಟನೆ

ದಾಸರಹಳ್ಳಿ: ಪೀಣ್ಯ ರಸ್ತೆಯಲ್ಲಿ ದುರಸ್ತಿ ಮಾಡದ ಬಿಬಿಎಂಪಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುರಸ್ತಿ ಕೆಲಸ ಮುಗಿದು ವರ್ಷಗಳೇ ಕಳೆದರು ರಸ್ತೆ ಮಾಡದ ಬಿಬಿಎಂಪಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ದ ಸ್ಥಳೀಯ ನಿವಾಸಿಗಳು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೆಟ್ಟಿಹಳ್ಳಿವಾರ್ಡ್ ನ ಮೆದ್ರಹಳ್ಳಿ ರಸ್ತೆಯಿಂದ ಚಿಕ್ಕಬಾಣಾವರ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭತ್ತದ ಪೈರು ನಾಟಿ ಮಾಡುವ ವಿಶೇಷವಾಗಿ ಪ್ರತಿಭಟನೆ ಮಾಡಲಾಯಿತು. ಸ್ಥಳೀಯ ಮಹಿಳೆ ಶೋಭಾ ಮಾತನಾಡಿ, ಸ್ಥಳೀಯ ಶಾಸಕರಾದ ಆರ್. ಮಂಜುನಾಥ್, ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದರು.
ಸ್ಥಳೀಯ ನಿವಾಸಿಗಳಾದ ಮೆದ್ರಹಳ್ಳಿ ರಘು, ಚಿದಂಬರ, ಶ್ರೀನಿವಾಸ್, ಭೈರಮ್ಮ, ಮುಂತಾದವರು ಇದ್ದರು.

Related