ಶಿವಮೊಗ್ಗ: ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಲೇ ಇರುತ್ತವೆ.

ಮೊನ್ನೆ ತಾನೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಶಿವಕುಮಾರ್ ಎಂಬತನ ಮೇಲೆ ರೌಡಿಶೀಟರ್ ಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು.

ಈ ಸಂಬಂಧ ಇಂದು ಶಿವಮೊಗ್ಗ ನಗರದಲ್ಲಿ ಪೊಲೀಸ್ ಅಧಿಕಾರಿಗಳು ರೌಡಿಶೀಟ್ ಮೇಲೆ ಫೈರಿಂಗ್ ಮಾಡಿ ರೌಡಿಶೀಟರ್ ಬಂಧನ ಮಾಡಿದ್ದಾರೆ.

ಹೌದು, ಶಿವಮೊಗ್ಗ ನಗರದಲ್ಲಿಂದು(ಡಿ.28 ಗುರುವಾರ) ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ರೌಡಿಶೀಟರ್ ಒಲಂಗ ಮೇಲೆ ಶಿವಮೊಗ್ಗದ ಜಯನಗರ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿನ ತ್ಯಾಜ್ಯವಳ್ಳಿ ಬಳಿ ಫೈರಿಂಗ್ ನಡೆದಿದೆ.

ಪೊಲೀಸರು ನಡೆಸಿದ ಫೈರಿಂಗ್‌ನಲ್ಲಿ ರೌಡಿಶೀಟರ್ ಒಲಂಗ ಅಲಿಯಾಸ್ ಮಂಜುನಾಥ ಕಾಲಿಗೆ ಗುಂಡು ತಗುಲಿದೆ. ಆರೋಪಿ ಒಲಂಗನನ್ನು ವಶಕ್ಕೆ ಪಡೆದು ತ್ಯಾಜ್ಯವಳ್ಳಿ ಗ್ರಾಮದ ಬಳಿ ಬಿಸಾಕಿದ್ದ ಆಯುಧ ಮಹಜರು ಮಾಡಲು ಹೋದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಓಡಿದ ಒಲಂಗನನ್ನು ಹಿಡಿಯಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದನು.

ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರೂ ಜಗ್ಗದಿದ್ದರಿಂದ ಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿದ್ದೇಗೌಡ ಅವರು ಕೊನೆಗೆ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Related