ಖಾತೆ ಹಂಚಿಕೆ ಖ್ಯಾತೆ ತೆಗೆದ ಸಚಿವರು -ರಾಜೀನಾಮೆಯ ಎಚ್ಚರಿಕೆ

ಖಾತೆ ಹಂಚಿಕೆ ಖ್ಯಾತೆ ತೆಗೆದ ಸಚಿವರು -ರಾಜೀನಾಮೆಯ ಎಚ್ಚರಿಕೆ

ರಾಜ್ಯ ಸರ್ಕಾರ ಇಂದು 29 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಎಂಟಿಬಿ ನಾಗರಾಜ್, ಆನಂದ್ ಸಿಂಗ್ ಸೇರಿದಂತೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಇಲಾಖೆ ನೀಡಿರುವುದಕ್ಕಾ ಸಚಿವ ಎಂಟಿಬಿ ನಾಗರಾಜ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಔಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ ೨-೩ ದಿನಗಳಲ್ಲಿ ನನ್ನ ನರ‍್ಧಾರ ತಿಳಿಸುವೆ ಎಂದು ಟ್ವೀಟ್ ಮೂಲಕ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನೊಂದು ಖಾತೆಯನ್ನು ಕೇಳಿದ್ದರೆ. ಬೇರೊಂದು ಖಾತೆಯನ್ನು ನೀಡಲಾಗಿದೆ. ಇದರಿಂದ ನಾನು ಅಸಮಾಧಾನಗೊಂಡಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರ ಬಳಿ ಖಾತೆ ಬದಲಾಯಿಸುವಂತೆ ಕೇಳಿಕೊಳ್ಳುವೆ. ಕೊಡದೇ ಇದ್ದರೆ ಶಾಸಕನಾಗಿ ಉಳಿಯುತ್ತೇನೆಂದು ಬಳ್ಳಾರಿಯಲ್ಲಿ ಸಚಿವ ಆನಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಆನಂದ್ ಸಿಂಗ್‌ಗೆ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಲಾಗಿದೆ.

Related