ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಶಾಂತ್ ನಿಲ್ ಗೆ ಬೆದರಿಕೆ ಹಾಕಿದ ಪ್ರಬಾಸ್ ಅಭಿಮಾನಿ..!!

  • In Cinema
  • May 14, 2022
  • 224 Views

ಪ್ರಭಾಸ್ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ದೇಶಕ ಪ್ರಶಾಂತ್ ನೀಲ್ ಗೆ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಲಾರ್ ಸಿನಿಮಾದ ಬಗ್ಗೆ ಯಾವುದೇ ಅಪ್ ಡೇಟ್ ನೀಡಿಲ್ಲ ಎಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಸಲಾರ್(Salaar) ಸಿನಿಮಾದ ಚಿತ್ರೀಕರಣ ಸದ್ಯ 35ರಷ್ಟು ಮುಕ್ತಾಯವಾಗಿದೆ. ಇನ್ನು ಉಳಿದ ಭಾಗದ ಚಿತ್ರೀಕರಣ ಮುಂದಿನ ವಾರದಿಂದ ಪ್ರಾರಂಭವಾಗುತ್ತಿದೆ. ಆದರೆ ಈ ನಡುವೆ ಪ್ರಭಾಸ್ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಪತ್ರ ಬರೆದಿದ್ದಾನೆ. ಅಂದಹಾಗೆ ಪ್ರಭಾಸ್ ಅಭಿಮಾನಿಗಳಿಂದ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ರಾಧೆ ಶ್ಯಾಮ್ ಬಿಡುಗಡೆಗೂ ಮೊದಲು ಅಭಿಮಾನಿಯೊಬ್ಬ ಅಪ್ ಡೇಟ್ ನೀಡುವಂತೆ ಕೋರಿ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಇದು ಕೂಡ ವೈರಲ್ ಆಗಿತ್ತು. ಇದೀಗ ಪ್ರಶಾಂತ್ ನೀಲ್ ಅವರಿಗೂ ಅಭಿಮಾನಿಗಳು ಅಪ್ ನೀಡುವಂತೆ ಬೆನ್ನುಬಿದ್ದಿದ್ದಾರೆ.

Related