ಪ್ರತಾಪ್ ಸಿಂಹ ಕೇವಲ ಬುರುಡೆ ಬಿಡ್ತಾನೆ: ಸಚಿವ ಮಹದೇವಪ್ಪ

ಪ್ರತಾಪ್ ಸಿಂಹ ಕೇವಲ ಬುರುಡೆ ಬಿಡ್ತಾನೆ: ಸಚಿವ ಮಹದೇವಪ್ಪ

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಅವರು ಧಮ್ಮು ತಾಕತ್ತು ಇದ್ರೆ ಅಭಿವೃದ್ಧಿ ಆಡಳಿತ ಮಾಡಿ ಎಂದು ಮೈಸೂರಿನಲ್ಲಿ ಹೇಳಿದ್ದರು.

ಈ ಸಂಬಂಧ ಇಂದು ಸಚಿವ ಡಾ. ಎಚ್‌ಸಿ ಮಹದೇವಪ್ಪ ಅವರು ಪ್ರತಿಕ್ರಿಯೆ ನೀಡಿ, ಸಂಸದ ಪ್ರತಾಪ್ ಸಿಂಹ ಸುಮ್ಮನೆ ಬುರುಡೆ ಬಿಡ್ತಾನೆ. ಪ್ರತಾಪ್ ಸಿಂಹ ಏನು ಮೇಸ್ತ್ರೀ ಏನ್ರೀ? ಎಂದು ಪ್ರಶ್ನಿಸುವ ಮೂಲಕ ಮೈಸೂರು-ಕೊಡಗು ಸಂಸದನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯಗೆ ಅವರಿಗೆ ಪ್ರತಾಪ್ ಸಿಂಹ ಸರಿಸಮಾನಾದ ನಾಯಕನಾ? ರಾಜ್ಯ ಹೆದ್ದಾರಿ ಆಗಿದ್ದಾಗ ಪ್ರತಾಪ್ ಸಿಂಹ ಸಂಸದ ಆಗಿರಲಿಲ್ಲ. ಯುಪಿಎ ಸರ್ಕಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಘೋಷಣೆ ಆಗಿತ್ತು. ರಾಷ್ಟ್ರೀಯ ಹೆದ್ದಾರಿ ಘೋಷಣೆ ಆಗಿದ್ದಾಗ ಪ್ರತಾಪ್ ಸಿಂಹ ಸಂಸದನೇ ಆಗಿರಲಿಲ್ವಲ್ಲ. ರಾಷ್ಟ್ರೀಯ ಹೆದ್ದಾರಿ ಘೋಷಣೆ ಆದ ಮೇಲೆ ಅದನ್ನ ಮಾಡೋದು ಸರ್ಕಾರದ ಕೆಲಸ ಅಲ್ವಾ? ಎಂದು ಪ್ರಶ್ನಿಸಿದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇವರಿಗೆ ಇನ್ ಚಾರ್ಜ್ ಕೊಟ್ಟಿದ್ರಾ? ಡಿಪಿಆರ್ ಮಾಡ್ಕೊಡು ಅಂತ ಕೇಳಿದ್ರಾ? ಎಂದು ಪ್ರತಾಪ್ ಸಿಂಹಗೆ ಟಾಂಗ್ ನೀಡಿದ ಸಚಿವ ಮಹಾದೇವಪ್ಪ, ಸುಮ್ಮನೆ ಬುರುಡೆ ಬಿಡುವ ಕೆಲಸ ಮಾಡಬಾರದು ಎಂದುರು.

 

Related