ಮೈಸೂರು: ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ, ರಾಜ್ಯದಲ್ಲಿ ಪ್ರತಾಪ್ ಸಿಂಹನಂತ ಅಯೋಗ್ಯ, ಮುಠ್ಠಾಳ ಇನ್ನೊಬ್ಬನಿಲ್ಲವೆಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಟೀಕೆ ಮಾಡಿದ್ದರು.
ಈ ಸಂಬಂಧ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಅವರು, ದಾರಿಯಲ್ಲಿ ಕೊಚ್ಚೆ ಇದ್ದರೆ ನಾವು ಆ ಕೊಚ್ಚೆಗೆ ಕಲ್ಲು ಹಾಕಿದರೆ ಆ ಕೊಚ್ಚೆ ನಮ್ಮ ಮೇಲೆ ಹಾರುತ್ತದೆ ಹಾಗಾಗಿ ನಾವು ಯಾವತ್ತೂ ಕೊಚ್ಚಿ ಮೇಲೆ ಕಲ್ಹಾಕಿ ಕೊಚ್ಚಿ ನಮ್ಮ ಮೇಲೆ ಆರಿಸಿಕೊಳ್ಳುವುದಿಲ್ಲವೆಂದು ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಠಕ್ಕರ್ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ, ನಾನು ಆ ಕೊಚ್ಚೆಗೆ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಶಾಸಕ ಪ್ರದೀಪ್ ಈಶ್ವರ್ರನ್ನು ಕೊಚ್ಚೆಗೆ ಹೊಲಿಸಿದರು.