ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿಗೆ ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರಿಗೆ ಭೇಟಿ

ಮೈಸೂರು: ಸಂಸ್ಕೃತಿಕ ನಗರಿ ಎಂದೇ ಪ್ರಸಿದ್ಧಿಯನ್ನು ಹೊಂದಿರುವ ಮೈಸೂರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ.

ಬಳಿಕ ಸಂಜೆ 5:45ಕ್ಕೆ ಮೈಸೂರಿಗೆ ಆಗಮಿಸಿ ಚೆನ್ನೈಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ.

 

Related