ಗಾಂಧಿನಗರ : ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರವಾಸದ ಎರಡನೇ ದಿನವಾದ ಇಂದು ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.
ಈಗ ಪ್ರಧಾನಿ ಮೋದಿ ಅವರು ಕೇಂದ್ರ ಸಶಸ್ತ್ರ ಪಡೆ ಹಾಗೂ ಗುಜರಾತ್ ಪೊಲೀಸ್ ಪರೇಡ್ ವೀಕ್ಷಣೆ ಮಾಡುತ್ತಿದ್ದಾರೆ. ಇಂದು ಕೂಡ ದೇಶದ ಮೊದಲ ಸೀ ಪ್ಲೇನ್ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.