ಖರ್ಗೆ ಕೆಂಡಾಮಂಡಲ

ಖರ್ಗೆ ಕೆಂಡಾಮಂಡಲ

ಕಲಬುರಗಿ : ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯ ಜನತೆ ಕಂಗಾಲಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ, ಜಿಲ್ಲೆಯಲ್ಲಿ ದೇಶದಲ್ಲೇ ಮೊದಲು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಕೊರೊನಾ ಸೋಂಕು ಪರೀಕ್ಷಾ ಕೇಂದ್ರ ತೆರೆದಿಲ್ಲ ಎಂದರು.

ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಟೆಸ್ಟ್ ಲ್ಯಾಬ್ ಇದೆ. ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ಕೊರೊನಾ ಸೋಂಕಿತರು ಕಲಬುರಗಿ ಜಿಲ್ಲೆಯಲ್ಲಿದ್ದು, ಸರ್ಕಾರ ಮತ್ತೊಂದು ಕೊರೊನಾ ಟೆಸ್ಟ್ ಲ್ಯಾಬ್ ಪ್ರಾರಂಭಿಸಿಲ್ಲ. ಬೆಂಗಳೂರು ಲ್ಯಾಬ್ ಗೆ ಜಿಲ್ಲಾಡಳಿತ  ಕಳುಹಿಸುತ್ತಿದೆ.

ಇಎಸ್ಐ ಆಸ್ಪತ್ರೆಯಲ್ಲಿ ಲ್ಯಾಬ್ ಪ್ರಾರಂಭ ಮಾಡುವುದಾಗಿ ಹೇಳಲಾಗಿತ್ತು. ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Related