ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಿಯಾಂಕ ಗಾಂಧಿ

ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಿಯಾಂಕ ಗಾಂಧಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಹುರಿದುಂಬಿಸಲೆಂದು ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿಯವರು ಇದೆ ಏಪ್ರಿಲ್ 23 ರಂದು ರಾಜ್ಯಕ್ಕೆ ಆಗಮಿಸಲಿದ್ದು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ  ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇನ್ನು ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ನರೇಂದ್ರ ಮೋದಿಯವರು ಮತ್ತು ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಮತಯಾಚನೆ ಮಾಡಿದ್ದಾರೆ.

ಲೋಕಸಭಾ ಚುನಾವಣೆಯು ನ್ಯಾಯಸಮ್ಮತವಾಗಿ ನಡೆದಿದ್ದೇ ಆದಲ್ಲಿ ಬಿಜೆಪಿಯು 180 ಸ್ಥಾನಗಳಿಗಿಂತ ಅಧಿಕ ಗಳಿಕೆ ಮಾಡುವುದಿಲ್ಲ ಎಂಬುದಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, ‘ಬಿಜೆಪಿಯು ಚುನಾವಣೆಗೆ ಮೊದಲೇ 400ಕ್ಕಿಂತ ಅಧಿಕ ಸೀಟು ಗೆಲ್ಲುವುದಾಗಿ ಹೇಳಿಕೊಂಡು ತಿರುಗುತ್ತಿದೆ.

ಆದರೆ ಚುನಾವಣೆಗೆ ಮೊದಲೇ ಅಷ್ಟು ಕರಾರುವಕ್ಕಾಗಿ ಎಷ್ಟು ಸ್ಥಾನ ಗೆಲ್ಲುತ್ತೇವೆಂದು ಹೇಳಲು ಅವರೇನು ಜ್ಯೋತಿಷಿಗಳೇ? ಇವಿಎಂಗಳನ್ನು ತಿರುಚದೇ, ನ್ಯಾಯಸಮ್ಮತವಾಗಿ ಲೋಕಸಭಾ ಚುನಾವಣೆ ನಡೆದಿದ್ದೇ ಆದಲ್ಲಿ ಬಿಜೆಪಿ 180 ಸ್ಥಾನಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲ್ಲಲಿದೆ’ ಎಂದು ತಿಳಿಸಿದರು.

 

Related