ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಯಾದಗಿರ : ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬೆಲೆ ಎರಿಕೆ ಹಾಗೂ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

ಒಂದು ಕಡೆ ರೈತರು 75 ದಿನಗಳ ಕಾಲ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಇನ್ನೂಂದೆಡೆ ದಿನೋಪಯೋಗಿ ವಸ್ತಗಳ ಬೆಲೆ ಗಗನಕ್ಕೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನಾ ಕಾರರು ಕಾರ್ಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್, ಮಾಜಿ ವಿಧಾನ ಪರಿಷತ್ ಸದ್ಯಸ ಚೆನ್ನಾರೆಡ್ಡಿ ತುನ್ನೂರ, ಬ್ಯಾಕ್ ಅಧ್ಯಕ್ಷ ಮರೆಪ್ಪ ಶ್ರೀನಿವಾಸರೆಡ್ಡಿ ನಾಯಕ, ಮರೆಪ್ಪ ಬಿಳ್ಹಾರ, ಹಾಗೂ ಬೀರೆಶ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

Related