ಬೊಮ್ಮನಹಳ್ಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೆಸಿಬಿ ಮತ್ತು ಹಿಟ್ಯಾಚಿಗಳ ಮಾಲೀಕರು ಮತ್ತು ಚಾಲಕರು ಬೊಮ್ಮನಹಳ್ಳಿಯ ಎಚ್ಎಸ್ಆರ್ ಹೆದ್ದಾರಿಯಲ್ಲಿ ಜೆಸಿಬಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು, ಇದರಿಂದ ಜೆಸಿಬಿ ಮಾಲೀಕರು ಮತ್ತು ಚಾಲಕರಿಗೆ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಎಚ್ಎಸ್ಆರ್ ಲೇಔಟ್ನಿಂದ ಸರ್ಜಾಪುರ ರಸ್ತೆವರೆಗೂ ಜೆಸಿಬಿ ಮತ್ತು ಹಿಟ್ಯಾಚಿಗಳನ್ನ ನಿಲ್ಲಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಡೀಸೆಲ್ ಬೆಲೆ ಇಳಿಸಬೇಕೆಂದು ಆಗ್ರಹಿಸಿದರು.