ಶೀಘ್ರ ಯತ್ನಾಳ್ ಬಾಂಬ್!

ಶೀಘ್ರ ಯತ್ನಾಳ್ ಬಾಂಬ್!

ವಿಜಯಪುರ : ಜಿಲ್ಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಅವರು ಆತ್ಮಹತ್ಯೆ ಪ್ರಯತ್ನಿಸಿದ್ದು, ನಂತರ ಓವರ್ ಡೋಸ್ ಕಥೆ ಹೇಳಿರುವುದು ನಿಮಗೆ ಗೊತ್ತೇ ಇದೆ.

ಆದರೆ ಈ ಕಥೆಯಲ್ಲಿ ಬಹುದೊಡ್ಡ ಸೀಕ್ರೇಟ್ ಒಂದು ಅಡಗಿರುವುದಾಗಿ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಹೇಳಿದ್ದಾರೆ.

ಸಂತೋಷ್ ಆತ್ಮಹತ್ಯೆ ಪ್ರಯತ್ನದ ಹಿಂದೆ ಭಾರಿ ದೊಡ್ಡ ಕಥೆಯಿದೆ. ಎಲ್ಲ ಘಟನಾವಳಿಗಳು ನನಗೆ ಗೊತ್ತಿದೆ. ಕಾಲ ಬಂದಾಗ ಎಲ್ಲವನ್ನ ನಾನು ಹೇಳ್ತೇನೆ. ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡಲಿ, ಆಮೇಲೆ ಎಲ್ಲವನ್ನು ವಿಚಾರವನ್ನು ಬಹಿರಂಗ ಮಾಡುತ್ತೇನೆ ಎಂದು ಯತ್ನಾಳ್ ತಿಳಿಸಿದ್ದಾರೆ.

Related