ಕೊರೋನಾ: ಪೊಲೀಸರಿಂದ ವಿಶೇಷ ಜಾಗೃತಿ

ಕೊರೋನಾ: ಪೊಲೀಸರಿಂದ ವಿಶೇಷ ಜಾಗೃತಿ

ರಾಯಚೂರು:  ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊರೋನಾ ತಡೆಗಟ್ಟಲು ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ರೈಲ್ವೆ ಸ್ಟೇಷನ್ ವೃತ್ತದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಜಾಗೃತಿ ಕಾರ್ಯಕ್ರಮ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿತು. 

ಇದೇ ವೇಳೆ ಮಾಸ್ಕ್ ಧರಿಸದೆ ಓಡಾಡುವ ಸಾರ್ವಜನಿಕರಿಗೆ, ಬೈಕ್ ಸವಾರರಿಗೆ ರೂ 200/- ದಂಡ ವಿಧಿಸಿ ಉಚಿತ ಮಾಸ್ಕ್ ವಿತರಣೆ ಮಾಡಿದರು. ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಪಾಡುವ, ಮಾಸ್ಕ್ ಧರಿಸುವ, ಸ್ಯಾನಿಟೆಜರ್ ಕಡ್ಡಾಯವಾಗಿ ಬಳಸುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹಾಗೂ ಸಿಬ್ಬಂದಿಯವರು ಸಲಹೆ ಸೂಚನೆಗಳನ್ನು ನೀಡಿದರು.

Related