ರಾಮೇಶ್ವರಂ ಕೆಫೆ; ಉಗ್ರ ಸೆರೆಯಾಗಿದ್ದೇ ರೋಚಕ

ರಾಮೇಶ್ವರಂ ಕೆಫೆ; ಉಗ್ರ ಸೆರೆಯಾಗಿದ್ದೇ ರೋಚಕ

ಬೆಂಗಳೂರು: ಬೆಂಗಳೂರು ನಗರದಲ್ಲಿರುವಂತಹ ರಾಮೇಶ್ವರಂ ಕೆಫೆ ಬಾಂಬು ಸ್ಪೋಟಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಕಳೆದ ತಿಂಗಳಿಂದಲೂ ಉಗ್ರರ ಹುಡುಕಾಟ ನಡೆಸಿದ್ದು ಈಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಹೌದು, ಬೆಂಗಳೂರು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸ್ ಅಧಿಕಾರಿಗಳು ರೋಚಕ ಕಾರ್ಯಚರಣೆಯಿಂದ ಬಂದಿಸಿದ್ದಾರೆ.

ಕೋಡ್‌ವರ್ಡ್‌ ಸಹಾಯದಿಂದ ಕೃತ್ಯ ಎಸಗಿದ್ದ ಮುಸಾವೀರ್ ಹುಸೇನ್  ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದ. ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಮುಸಾವೀರ್ ಹುಸೇನ್ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ್ದ ಅಬ್ದುಲ್ ಮತೀನ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಮಾಝ್‌ ಮುನೀರ್‌ನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಮುನೀರ್ ಸೆಲ್ ಮೇಲೆ ದಾಳಿ ಮಾಡಿದಾಗ ಮೆಮೋರಿ ಕಾರ್ಡ್ ಪತ್ತೆಯಾಗಿತ್ತು. ಈ ಮೆಮೋರಿ ಕಾರ್ಡ್‌ ಪರಿಶೀಲಿಸಿದಾಗ ಹಲವು ಕೋಡ್‌ ವರ್ಡ್‌ ಸಿಕ್ಕಿದ್ದವು. ಈ ಕೋಡ್‌ ವರ್ಡ್‌ ಡಿಕೋಡ್‌ ಮಾಡಿದಾಗ ಆರೋಪಿಗಳ ಮಾಹಿತಿ ಸಿಗತೊಡಗಿತು ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಈ ಖಚಿತ ಮಾಹಿತಿಯನ್ನು ಆಧಾರಿಸಿ ತನಿಖೆಗೆ ಇಳಿದಾಗ ಆರೋಪಿಗಳು ಪಶ್ಚಿಮ ಬಂಗಾಳದಲ್ಲೇ ತಲೆ ಮರೆಸಿಕೊಂಡಿದ್ದ ವಿಚಾರ ತಿಳಿದು ಬಂದಿತ್ತು. ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ ಎನ್‌ಐಎ ಇಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಅಚ್ಚರಿಯ ವಿಷಯ ಏನೆಂದರೆ ಮುನೀರ್‌ ಜೈಲಿನಲ್ಲಿ ಕುಳಿತೇ ಕೋಡ್‌ ವರ್ಡ್‌ ಬರೆದಿದ್ದ.

Related