ಬೆಂಗಳೂರು: ನಿನ್ನೆ ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಜಯಗಳಿಸಿದೆ.
ಹೌದು, ನೆನ್ನೆ ನಡೆದ ಪಿಎಲ್ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಜಯಗಳಿಸಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಕರಿ ನೋಡಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಅಭಿಮಾನಿಗಳನ್ನು ಕುಣಿಸಿತ್ತು.
ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ಮುಂದೆ ಪಂಜಾಬ್ ಕಿಂಗ್ಸ್ ನೀಡಿದ 177ರನ್ ಟಾರ್ಗೆಟನ್ನು ಆರ್ಸಿಬಿ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಕೊಹ್ಲಿ ವಿಕೆಟ್ ಪತನದ ಬಳಿಕ ತಂಡದ ಆತಂಕ ಹೆಚ್ಚಾಗಿತ್ತು. ಆದರೆ ಮಹಿಪಾಲ್ ಲೊಮ್ರೊರ್ ಹಾಗೂ ದಿನೇಶ್ ಕಾರ್ತಿಕ್ ಹೋರಾಟದಿಂದ ಆರ್ಸಿಬಿ ಗೆಲುವಿನ ದಡ ಸೇರಿತು.
177 ರನ್ ಟಾರ್ಗೆಟ್ ಚೇಸ್ ಮಾಡಲು ಕಣಕ್ಕಿಳಿದ ಆರ್ಸಿಬಿಗೆ ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಆದರೆ ನಾಯಕ ಫಾಫ್ ಡುಪ್ಲೆಸಿಸ್ ಬಹುಬೇಗನೆ ವಿಕೆಟ್ ಕೈಚೆಲ್ಲಿ ನಿರಾಸೆ ಮೂಡಿಸಿದರು. ಡುಪ್ಲಿಸಿ ವಿಕೆಟ್ ಪತನ ಆರ್ಸಿಬಿ ಅಭಿಮಾನಿಗಳ ಆತಂಕ ಹೆಚ್ಚಿಸಿತ್ತು. ಇದರ ಬೆನ್ನಲ್ಲೇ ಕ್ಯಾಮರೂನ್ ಗ್ರೀನ್ ವಿಕೆಟ್ ಪತನಗೊಂಡಿತು. ಡುಪ್ಲಿಸಿಸ್ ಹಾಗೂ ಗ್ರೀನ್ ತಲಾ 3 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು.