ರಸ್ತೆ ದುರಸ್ತಿ ಪಡಿಸಿ

ರಸ್ತೆ ದುರಸ್ತಿ ಪಡಿಸಿ

ಚಿಂಚೋಳಿ: ವಿಧಾನಸಭಾ ಕ್ಷೇತ್ರದ ಬೆಡಸೂರ ಗ್ರಾ.ಪಂ ವ್ಯಾಪ್ತಿಯ ಬೆಡಸೂರ ತಾಂಡಾ ದಿಂದ ಮುಕರಂಬ ಕ್ರಾಸ್ ನಡುವೆ ಇರುವಂತ ರಸ್ತೆ ಸಂಪರ್ಕ ಹದಗೆಟ್ಟಿದ್ದು ಪ್ರಯಾಣಿಸಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಕಲಬುರ್ಗಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಕೆಸರಿನ ಗದ್ದೆಗಳಾಗಿ ಹದಗೆಟ್ಟಿದೆ. ಈ ರಸ್ತೆಯಲ್ಲಿ ಪ್ರತಿದಿನ ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ರಸ್ತೆಯನ್ನು ದುರಸ್ತಿ ಪಡಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.
ಶಾಸಕ ಡಾ. ಅವಿನಾಶ್ ಜಾಧವ್ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಪರಿಹಾರ ಕಲ್ಪಿಸುವ ಮೂಲಕ ಸಾರ್ವಜನಿಕರ ಸಂಕಷ್ಟ ನಿವಾರಣೆ ಮಾಡಬೇಕಾಗಿದೆ ಎಂದು ದಲಿತ ಸೇನೆಯ ತಾಲ್ಲೂಕು ಸಂಘಟನಾ ಕಾರ್ಯದರ್ಶಿ, ಗ್ರಾ.ಪಂ ಸದಸ್ಯ ಸುರೇಶ ರಾಣಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related