ಗಣರಾಜ್ಯೋತ್ಸವ ಸಂಭ್ರಮ

ಗಣರಾಜ್ಯೋತ್ಸವ ಸಂಭ್ರಮ

ದಾವಣಗೆರೆ : 72 ನೇ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ರಾಷ್ಟ ಧ್ವಜವನ್ನು ಹಾರಿಸಿದರು.

ಇದಕ್ಕೂ ಮೊದಲು ಮಹಾತ್ಮ ಗಾಂಧಿಜೀ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಪೋಲಿಸ್, ಸೇವಾ ದಳ, ಸ್ಕೌಟ್ ಅಂಡ್ ಗೈಡ್ಸ್ ಪಥ ಸಂಚಲನ ನಡೆಯಿತು.

ಈ ಸಂದರ್ಭದಲ್ಲಿ  ದಾವಣಗೆರೆ ಶಾಸಕ ಎಸ್.ಎ.ರವೀಂದ್ರನಾಥ, ಸಂಸದ ಜಿ.ಎಂ ಸಿದ್ದೇಶ್ವರ ಸೇರಿ ಹಲವರು ಉಪಸ್ಥಿತರಿದ್ದರು.

Related