ಹಿರಿಯ ನಾಯಕರ ವಿರುದ್ಧ ಅಸಮಾಧಾನ

  • In State
  • August 11, 2021
  • 390 Views
ಹಿರಿಯ ನಾಯಕರ ವಿರುದ್ಧ ಅಸಮಾಧಾನ

ಹೊಸಪೇಟೆ: ಸಚಿವ ಆನಂದ ಸಿಂಗ್ ಬುಧವಾರ ವರದಿಗಾರರೊಂದಿಗೆ ಮಾತಾನಾಡಿ ಪಕ್ಷದಲ್ಲಿ ನನಗೆ ಕೆಲವೊಂದು ನೋವುಗಳಿವೆ. ಅದನ್ನು ನಾನು ನಾಲ್ಕು ಗೋಡೆಗಳ ಮಧ್ಯೆ ರ‍್ಚಿಸಿ ಬಗೆಹರಿಸಿಕೊಳ್ಳಲು ಬಯಸುತ್ತೇನೆ, ಎಂದು ಸ್ಪಷ್ಟಪಡಿಸಿದರು.

ಇವತ್ತು ನಾನು ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡುವುದಿಲ್ಲ, ನನ್ನ ರಕ್ಷಣೆಗೆ ನಾಯಕರಿದ್ದರೂ ಎಂಬ ತಪ್ಪು ಕಲ್ಪನೆಯಲ್ಲಿದೂ, ಎಲ್ಲಾ ವಿಚಾರವನ್ನು ಹಂಚಿಕೊಳ್ಳುತ್ತಿದೆ ಎಂದು ಹಿರಿಯ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಾನು ಎಂದಿಗೂ ವಿಶ್ವಾಸ ಕಳೆದುಕೊಂಡಿಲ್ಲ. ನನ್ನ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಶಾಸಕನಾಗಿ ರಾಜಕೀಯ ಜೀವನ ಆರಂಭಿಸಿದ್ದು, ಇಲ್ಲಿಯೇ ರಾಜಕೀಯ ಜೀವನ ಅಂತ್ಯವಾಗಲೂಬಹುದು, ಅಥವಾ ಪುನರಾರಂಭವಾಗಲೂಬಹುದು, ಆ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದವೊಂದಿದ್ದರೆ ಸಾಕು, ಎಂದರು.

Related