ಅರ್ಹತೆಗೆ ತಕ್ಕಂತೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ

ಅರ್ಹತೆಗೆ ತಕ್ಕಂತೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ

ಬಾಗಲಕೋಟೆ : ಯಾವುದೇ ಒತ್ತಡದ ಮೂಲಕ ಮೀಸಲಾತಿ ತೆಗೆದುಕೊಳ್ಳಲು ಆಗಲ್ಲ, ಅರ್ಹತೆಗೆ ತಕ್ಕಂತೆ ಮೀಸಲಾತಿ ಸಿಗಬೇಕು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಈ ವೇಳೆ  ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಈಶ್ವರಪ್ಪ ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಮಾರ್ಚ್ 4 ರ ಡೆಡ್ ಲೈನ್ ನೀಡಿದೆ. ಆದರೆ ಒತ್ತಡದ ಮೂಲಕ ಮೀಸಲಾತಿ ತೆಗೆದುಕೊಳ್ಳಲು ಆಗಲ್ಲ. ಸಮಾಜದ ಸ್ವಾಮೀಜಿಗಳು ಧರಣಿ, ಉಪವಾಸ ಕುಳಿತುಕೊಳ್ತಿವಿ ಅಂತಾ ಶುರು ಮಾಡ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒತ್ತಡದ ಮೇಲೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ ಎಂದರು.

ಅರ್ಹತೆಗೆ ತಕ್ಕಂತೆ ಮೀಸಲಾತಿ ಸಿಗಬೇಕು. ಅದು ಎಲ್ಲ ವರ್ಗದ ಬಡ ಕುಟುಂಬಗಳಿಗೆ ಮೀಸಲಾತಿ ಸಿಗಬೇಕು. ಕ್ರಿಮಿ ಲೇಯರ್ ಪದ್ಧತಿ ಜಾರಿಗೆ ಬರಬೇಕು. ಕಡು ಬಡವರಿಗೆ ಮಾತ್ರ ಮೀಸಲಾತಿ ಸಿಗಬೇಕು ಎಂದು ಹೇಳಿದರು.

Related