ಬೆಂಗಳೂರು : ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿರುವಂತ ಸಚಿವ ಮಾಧುಸ್ವಾಮಿ, ಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.
ಈ ವೇಳೆ ಮಾತನಾಡಿದ ಅವರು, ಜ. 26ರ ಗಣರಾಜ್ಯೋತ್ಸವದ ದಿನವಾದ ನಾಳೆ, ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ, ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುತ್ತೇನೆ. ಅದನ್ನು ಅಂಗೀಕರಿಸೋದು, ಸಿಎಂ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂಬುದಾಗಿ ತಿಳಿಸಿದರು.