ಒಂದೇ ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ: ಸಿಎಂ

ಒಂದೇ ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ: ಸಿಎಂ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎರಡನೆಯ ಜನಸ್ಪಂದನ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದಿಂದ ಜನರು ಆಹ್ವಾನಿಸಿದ್ದರು.

ಇನ್ನು ಜನಸ್ಪಂದನ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡನೇ ಜನಸ್ಪಂದನದ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮ ಗೋಷ್ಠಿಯಲ್ಲಿ ನೀಡಿದ ಖಡಕ್ ಸೂಚನೆಗಳು

ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ.

ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಸಿಎಂ ಸೂಚಿಸಿದರು.

ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ.

ಒಂದು ತಿಂಗಳೊಳಗೆ ಹೆಚ್ಚು ಅರ್ಜಿ, ಅಹವಾಲು ಪರಿಗರಿಸಿ ಎಂದು DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ ಸಿಎಂ ನೀಡಿದ ಸಿಎಂ ಸಿದ್ದರಾಮಯ್ಯ .ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.

Related