ತಿಮ್ಮಕ್ಕನ 111ನೇ ಜನ್ಮದಿನ ಸಂಭ್ರಮ

ತಿಮ್ಮಕ್ಕನ 111ನೇ ಜನ್ಮದಿನ ಸಂಭ್ರಮ

ಬೆಂಗಳೂರು, ಜೂನ್ 30 : ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ ತುಮಕೂರು ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಶನ್ ಇವರ ವತಿಯಿಂದ ವಸಂತನಗರದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ವೃಕ್ಷ ಮಾತೆ, ಪದ್ಮಶ್ರೀ ನಾಡೋಜ, ಡಾ. ಸಾಲು ಮರದ ತಿಮ್ಮಕ್ಕ ಅವರ 111ರ ಜನುಮ ಸಂಭ್ರಮ ಹಾಗೂ ನ್ಯಾಷನಲ್ ಗ್ರೀನರಿ ಅವಾರ್ಡ್-2020ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು .


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಾಲುಮರದ ತಿಮ್ಮಕ್ಕ ಅವರ ೧೧೧ ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಸಾಲುಮರದ ತಿಮ್ಮಕ್ಕ ಇಂಟರ ನ್ಯಾಷನಲ್ ಫೌಂಡೇಶನ್ ಸಂಸ್ಥೆ ಏರ್ಪಡಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಲುಮರದ ತಿಮ್ಮಕ್ಕ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ವಿ. ಸೋಮಣ್ಣ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಸೇರಿದಂತೆ ಇತರೆ ನಾಯಕರು ಉಪಸ್ಥಿತರಿದ್ದರು.

Related