ಸಂತೋಷ್ ಆತ್ಮಹತ್ಯೆ ಪ್ರಯತ್ನ ಪ್ರಕರಣ : ಸಿಎಂ ಸ್ಪಷ್ಟನೆ

ಸಂತೋಷ್ ಆತ್ಮಹತ್ಯೆ ಪ್ರಯತ್ನ ಪ್ರಕರಣ : ಸಿಎಂ ಸ್ಪಷ್ಟನೆ

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ, ರಾಜಕೀಯ ಕಾರ್ಯದರ್ಶಿ ಎನ್‌ಆರ್ ಸಂತೋಷ್ ಅವರು, ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ನೋಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧಾವಿಸಿದ್ದರು.

ಸಂತೋಷ್ ಬೆಳಿಗ್ಗೆಯಿಂದ ನಗುನಗುತ್ತಾ ಚೆನ್ನಾಗಿಯೇ ಇದ್ದ. ಯಾವುದೇ ಆತಂಕ ಇಲ್ಲ ಎಂದು ಯಡಿಯೂರಪ್ಪ ಅವರು ಸಂತೋಷ್ ಯೋಗ ಕ್ಷೇಮ ವಿಚಾರಿಸಿದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಬೆಳಿಗ್ಗೆ ನನ್ನ ಜತೆ ಮುಕ್ಕಾಲು ಗಂಟೆ ವಾಕ್ ಮಾಡಿದ್ದ. ಖುಷಿ ಖುಷಿಯಾಗಿ ಚೆನ್ನಾಗಿ ಇದ್ದ. ಅವನ ಪತ್ನಿ ಜತೆ ನಾನು ಮಾತನಾಡಿದ್ದೇನೆ. ಯಾವುದೇ ಆತಂಕ ಇಲ್ಲ. ಬೆಳಿಗ್ಗೆ ಎದ್ದು ಓಡಾಡುತ್ತಾನೆ. ಎಂದು ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯ ರಾಜಕೀಯದ ಬೆಳವಣಿಗೆಗಳ ಹಿನ್ನೆಲೆ ಸಂತೋಷ್ ಬಹ ಬೇಸರದಿಂದ ಇದ್ದರು ಎಂದು ಅವರ ಪತ್ನಿ ಜಾಹ್ನವಿ ಹೇಳಿದ್ದಾರೆ. ಊಟಕ್ಕೆ ಏನು ಮಾಡುವುದು ಎಂದು ಕೇಳಿದಾಗ ಪ್ರಜ್ಞೆ ತಪ್ಪಿರುವುದು ಕಂಡುಬAತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದೆವು. ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ವೈದ್ಯರ ಹೇಳಿದರು.

Related